ಕಾಣಿಯೂರು:ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.2, ಮತ್ತು 3 ರಂದು ನಡೆಯಲಿದೆ.
ಸೆ.02ನೇ ಸೋಮವಾರ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ,ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಾಂದಿಪನಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀಪ್ರಸಾದ್ ಧಾರ್ಮಿಕ ಭಾಷಣ ಮಾಡಲಿದ್ದು, ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ನಂತರ ರಾತ್ರಿ 12ರ ತನಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆ 03ರ ಮಂಗಳವಾರ ದಂದು ಬೆಳಿಗ್ಗೆ ಮಹಾಪೂಜೆ, ಗಣಹೋಮ ನಡೆದು ನಂತರ ವಿಷ್ಣು ಪ್ರಿಯ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ವಿಗ್ರಹ ವಿಸರ್ಜನಾ ಮೆರವಣಿಗೆ ಭಜನಾ ಮಂದಿರದಿಂದ ಹೊರಟು ಕೂಡುರಸ್ತೆಗಾಗಿ ಕಾಣಿಯೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಕಜೆ ಬಾಗಿಲು ಎಂಬಲ್ಲಿ ಜಲಸ್ತಂಭನ ಗೊಳ್ಳಲಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…