ಕಾಣಿಯೂರು:ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.2, ಮತ್ತು 3 ರಂದು ನಡೆಯಲಿದೆ.
ಸೆ.02ನೇ ಸೋಮವಾರ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ,ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಾಂದಿಪನಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀಪ್ರಸಾದ್ ಧಾರ್ಮಿಕ ಭಾಷಣ ಮಾಡಲಿದ್ದು, ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ನಂತರ ರಾತ್ರಿ 12ರ ತನಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆ 03ರ ಮಂಗಳವಾರ ದಂದು ಬೆಳಿಗ್ಗೆ ಮಹಾಪೂಜೆ, ಗಣಹೋಮ ನಡೆದು ನಂತರ ವಿಷ್ಣು ಪ್ರಿಯ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ವಿಗ್ರಹ ವಿಸರ್ಜನಾ ಮೆರವಣಿಗೆ ಭಜನಾ ಮಂದಿರದಿಂದ ಹೊರಟು ಕೂಡುರಸ್ತೆಗಾಗಿ ಕಾಣಿಯೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಕಜೆ ಬಾಗಿಲು ಎಂಬಲ್ಲಿ ಜಲಸ್ತಂಭನ ಗೊಳ್ಳಲಿದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…