ಕಾಣಿಯೂರು:ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.2, ಮತ್ತು 3 ರಂದು ನಡೆಯಲಿದೆ.
ಸೆ.02ನೇ ಸೋಮವಾರ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ,ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಾಂದಿಪನಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀಪ್ರಸಾದ್ ಧಾರ್ಮಿಕ ಭಾಷಣ ಮಾಡಲಿದ್ದು, ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ನಂತರ ರಾತ್ರಿ 12ರ ತನಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆ 03ರ ಮಂಗಳವಾರ ದಂದು ಬೆಳಿಗ್ಗೆ ಮಹಾಪೂಜೆ, ಗಣಹೋಮ ನಡೆದು ನಂತರ ವಿಷ್ಣು ಪ್ರಿಯ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ವಿಗ್ರಹ ವಿಸರ್ಜನಾ ಮೆರವಣಿಗೆ ಭಜನಾ ಮಂದಿರದಿಂದ ಹೊರಟು ಕೂಡುರಸ್ತೆಗಾಗಿ ಕಾಣಿಯೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಕಜೆ ಬಾಗಿಲು ಎಂಬಲ್ಲಿ ಜಲಸ್ತಂಭನ ಗೊಳ್ಳಲಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…