Advertisement
ಸುದ್ದಿಗಳು

ಕಾನೂನು ತರಬೇತಿ ಕಾರ್ಯಾಗಾರ: ನೆಮ್ಮದಿಯ ಬದುಕಿಗೆ ಕಾನೂನಿನ ಅರಿವು ಅಗತ್ಯ: ನ್ಯಾಯಾಧೀಶ ವಿ.ವಿ. ಮಲ್ಲಾಪುರ ಸಲಹೆ

Share

ಮಡಿಕೇರಿ : ಅರೆಕಾಲಿಕ ಕಾನೂನು ಸ್ವಯಂ ಸೇವಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನೊಂದವರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವಿ.ವಿ  ಮಲ್ಲಾಪುರ ಅವರು ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ವಕೀಲರ ಸಂಘ ಮತ್ತು ಮಡಿಕೇರಿ ರೋಟರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ’ ಗುರುತಿನ ಚೀಟಿ ವಿತರಣೆ ಹಾಗೂ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅರೆಕಾಲಿಕ ಕಾನೂನು ಸ್ವಯಂ ಸೇವಕರು ತಮ್ಮ ಕಾರ್ಯದ ಜೊತೆಗೆ ಕಾನೂನಿನ ಬಗ್ಗೆ ಮಾಹಿತಿ ನೀಡಿದಾಗ ಸಮಾಜದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ಇರುವುದಿಲ್ಲ. ಹಾಗೆಯೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನೊಂದವರನ್ನು ರಕ್ಷಣೆ ಮಾಡುವಂತಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ಮಾತನಾಡಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ತಮ್ಮ ತಮ್ಮ ಗ್ರಾಮಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವಂತಾಗಬೇಕು. ಸಮಸ್ಯೆಗಳಿದ್ದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರುವಂತಾಗಬೇಕು ಎಂದು ಅವರು ನುಡಿದರು.

ವಕೀಲರಾದ ಎಂ.ಎ.ನಿರಂಜನ್ ಅವರು ಮಾತನಾಡಿ ಪ್ರತಿಯೊಬ್ಬರಲ್ಲೂ ಸಹ ಕಾನೂನಿನ ಜೊತೆಗೆ ಸಾಮಾಜಿಕ ಜವಾಬ್ದಾರಿಯೂ ಅತ್ಯಗತ್ಯ ಎಂಬುದನ್ನು ಮರೆಯಬಾರದು ಎಂದು ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ವೈವಾಹಿಕ ಜೀವನ, ಆಸ್ತಿಯ ಹಕ್ಕು ಹೀಗೆ ಹಲವು ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವರ್ಷದಲ್ಲಿ 150 ರಿಂದ 200 ವೈವಾಹಿಕ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ವಿಭಕ್ತ ಕುಟುಂಬವೇ ಕಾರಣವೆಂದರೆ ತಪ್ಪಾಗಲಾರದು ಎಂದು ಅವರು ಪ್ರತಿಪಾದಿಸಿದರು.
ಅವಿಭಕ್ತ ಕುಟುಂಬದಲ್ಲಿ ಅನ್ಯೋನ್ಯತೆಯಿಂದ ಬದುಕಿದರೆ ಉತ್ತಮ ಜೀವನ ನಡೆಸಬಹುದು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದರು.

ಪ್ರಮುಖರಾದ ಸುರೇಶ್ ಚಂಗಪ್ಪ ಅವರು ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು. ಶಾಂತಿ, ಸಹನೆ, ಸಹಭಾಳ್ವೆಯಿಂದ ಪ್ರತಿಯೊಬ್ಬರೂ ಬದುಕು ಕಟ್ಟಿಕೊಳ್ಳುವಂತಾಗಬೇಕು. ಹಾಗಾದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ವಕೀಲರು ಹಾಗೂ ಮಡಿಕೇರಿ ರೋಟರಿ ಅಧ್ಯಕ್ಷರಾದ ರತನ್ ತಮ್ಮಯ್ಯ ಅವರು ಸ್ವಾಗತಿಸಿ ಮಾತನಾಡಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕಾನೂನಿನ ಗುರುತಿನ ಚೀಟಿ ಪಡೆದು ಸಮಾಜದಲ್ಲಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ವಕೀಲರಾದ ಪಿ.ಯು.ಪ್ರೀತಂ ಮತ್ತು ಕೆ.ಎಂ.ಮೀನಾಕುಮಾರಿ ಅವರು ಮಾತನಾಡಿದರು. ಪ್ರಮುಖರಾದ ಈಶ್ವರ್ ಭಟ್, ಕಾರ್ಯಪ್ಪ, ಸದಾಶಿವ, ಸಿಡಿಪಿಒ ಸವಿತಾ ಇತರರು ಇದ್ದರು. ಒಡಿಪಿ ಸಂಸ್ಥೆಯ ಪ್ರತಿನಿಧಿಗಳು ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

58 minutes ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 hour ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago