ಮಂಗಳೂರು: ಕಾನೂನುಬಾಹಿರವಾಗಿ ತಂಬಾಕು ವಸ್ತುಗಳನ್ನು ವ್ಯಾಪಾರ ಮಾಡುವವರ ಮೇಲೆ ಹದ್ದಿನ ನಿಗಾ ವಹಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧು.ಬಿ ರೂಪೇಶ್ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಶಾಲಾ ಕಾಲೇಜು ಸಮೀಪ ಪರಿಸರದಲ್ಲಿ ತಂಬಾಕು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈ ಮೊದಲು ರೂ.200 ದಂಡ ವಿಧಿಸಿದ್ದರೂ, ಮತ್ತೆ ಅದೇ ವ್ಯಾಪಾರವನ್ನು ಮುಂದುವರೆಸುತ್ತಿರುವುದು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಇಂತಹ ಪ್ರಕ್ರಿಯೆಯನ್ನು ಮುಂದುವರೆಸುತ್ತಿರುವ, ಪುನರಾವರ್ತಿತ ಅಪರಾಧಿಗಳನ್ನು ಪತ್ತೆ ಹಚ್ಚಿ ಅಂತಹ ವ್ಯಾಪಾರಸ್ಥರ ಅಂಗಡಿಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ, ಕಾಲೇಜು ವ್ಯಾಪ್ತಿಗಳಲ್ಲಿರುವ ಅಂಗಡಿಗಳಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಶಾಲಾ ಸಿಬ್ಬಂದಿ ವರ್ಗ ಗಮನ ಹರಿಸಬೇಕು, ಮತ್ತು ಶಾಲಾ ಕಾಲೇಜು ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ಆಯಾ ಸಂಸ್ಥೆಗಳಿಂದ ತಂಬಾಕು ಮುಕ್ತ ಅಂಗಡಿ ಎಂದು ಘೋಷಣೆ ಹೊರಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಕೆಲವು ಇಲಾಖೆಗಳ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿರುವ ಹೋರ್ಡಿಂಗ್ಸ್ನಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಹೀರಾತು ನೀಡುವ ಕುರಿತು ಸಭೆಯಲ್ಲಿ ಸಲಹೆಗಳನ್ನು ನೀಡಲಾಯಿತು. ನಗರ, ಹಳ್ಳಿ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಸಂಬಂಧ ಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…