Advertisement
ಸುದ್ದಿಗಳು

ಕಾನೂನು ಬಾಹಿರ ತಂಬಾಕು ವಸ್ತು ಮಾರಾಟಗಾರರ ಮೇಲೆ ಸೂಕ್ತ ಕ್ರಮ – ಜಿಲ್ಲಾಧಿಕಾರಿ

Share

ಮಂಗಳೂರು: ಕಾನೂನುಬಾಹಿರವಾಗಿ ತಂಬಾಕು ವಸ್ತುಗಳನ್ನು ವ್ಯಾಪಾರ ಮಾಡುವವರ ಮೇಲೆ ಹದ್ದಿನ ನಿಗಾ ವಹಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧು.ಬಿ ರೂಪೇಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು.     ಶಾಲಾ ಕಾಲೇಜು ಸಮೀಪ ಪರಿಸರದಲ್ಲಿ ತಂಬಾಕು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈ ಮೊದಲು ರೂ.200 ದಂಡ ವಿಧಿಸಿದ್ದರೂ, ಮತ್ತೆ ಅದೇ ವ್ಯಾಪಾರವನ್ನು ಮುಂದುವರೆಸುತ್ತಿರುವುದು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ  ಬಂದಿರುತ್ತದೆ. ಇಂತಹ ಪ್ರಕ್ರಿಯೆಯನ್ನು ಮುಂದುವರೆಸುತ್ತಿರುವ,   ಪುನರಾವರ್ತಿತ ಅಪರಾಧಿಗಳನ್ನು ಪತ್ತೆ ಹಚ್ಚಿ ಅಂತಹ ವ್ಯಾಪಾರಸ್ಥರ ಅಂಗಡಿಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ, ಕಾಲೇಜು ವ್ಯಾಪ್ತಿಗಳಲ್ಲಿರುವ ಅಂಗಡಿಗಳಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಶಾಲಾ ಸಿಬ್ಬಂದಿ ವರ್ಗ ಗಮನ ಹರಿಸಬೇಕು, ಮತ್ತು ಶಾಲಾ ಕಾಲೇಜು ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ಆಯಾ ಸಂಸ್ಥೆಗಳಿಂದ ತಂಬಾಕು ಮುಕ್ತ ಅಂಗಡಿ ಎಂದು ಘೋಷಣೆ ಹೊರಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಕೆಲವು ಇಲಾಖೆಗಳ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿರುವ  ಹೋರ್ಡಿಂಗ್ಸ್‍ನಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಹೀರಾತು ನೀಡುವ ಕುರಿತು ಸಭೆಯಲ್ಲಿ ಸಲಹೆಗಳನ್ನು ನೀಡಲಾಯಿತು. ನಗರ, ಹಳ್ಳಿ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಸಂಬಂಧ ಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 minutes ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

1 hour ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago