Advertisement
ಜಿಲ್ಲೆ

ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಬೆಳೆಗಾರರ ಒಕ್ಕೂಟ

Share

ಮಡಿಕೇರಿ : ಕಾಫಿ ಕೃಷಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರದ ವಾಣಿಜ್ಯ ಸಚಿವ ಮತ್ತು ರಸಗೊಬ್ಬರ ಖಾತೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಸಂಬಂಧಿತ ಮನವಿ ಸಲ್ಲಿಸಿದೆ. ಬೆಳೆಗಾರರಿಗೆ ಅಗತ್ಯವಾಗಿರುವ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕದ ಕಾಫಿ ಜಿಲ್ಲೆಗಳ ಸಂಸದರ ನೇತೃತ್ವದಲ್ಲಿನ ಬೆಳೆಗಾರರ ನಿಯೋಗವು ಸಚಿವರನ್ನು ಒತ್ತಾಯಿಸಿದೆ.

ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್.ಬಕ್ಕರವಳ್ಳಿ, ಉಪಾಧ್ಯಕ್ಷರಾದ ನಂದಾಬೆಳ್ಳಿಯಪ್ಪ, ಡಿ.ಎಂ.ವಿಜಯ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ಅವರುಗಳನ್ನು ಒಳಗೊಂಡ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸಸ್ ಸದಸ್ಯರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಪ್ರಜ್ವಲ್ ರೇವಣ್ಣ, ಪಿ.ಸಿ.ಮೋಹನ್ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಎನ್.ಪಿ.ಕೆ.  ಹಾಗೂ ಮೈಕ್ರೋನ್ಯೂಟ್ರಿಯಂಟ್ ಗಳನ್ನು ಒಳಗೊಂಡಿರುವ ಕಾಫಿ ವಿಶೇಷ ಗೊಬ್ಬರಕ್ಕಾಗಿ ಮನವಿ ಪತ್ರವನ್ನು ಸಲ್ಲಿಸಿ ನಿಯೋಗದಿಂದ ಚರ್ಚಿಸಿತು.

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಯೋಗವು ಕಳೆದ ವರ್ಷ ಮಹಾಮಳೆಯಿಂದಾಗಿ ಕಾಫಿ ಬೆಳೆ ಮತ್ತು ಆಸ್ತಿ ಹಾನಿ ತೀವ್ರವಾಗಿ ಉಂಟಾಗಿದ್ದು  ಕೃಷಿಕರು ಸಂಕಷ್ಟು ಎದುರಿಸುತ್ತಿದ್ದಾರೆ. ಆ ನಂತರದ 160 ದಿನಗಳ ಬರಗಾಲದಿಂದಾಗಿ ಮುಂದಿನ ವರ್ಷಗಳಲ್ಲಿ ಬೆಳೆನಷ್ಟವಾಗುವ ಎಲ್ಲಾ ಸಾಧ್ಯತೆಗಳಿದೆ. 26 ವರ್ಷಗಳಿಗೆ ಹೋಲಿಸಿದರೆ ಈಗ ಕಾಫಿ ಬೆಲೆ ಅತ್ಯಂತ ಕಡಮೆಯಾಗಿದೆ. 30 ಜೂನ್ 2019 ಕ್ಕೆ ಅನ್ವಯಿಸುವಂತೆ ಕಾಫಿ ಸಾಲದ ಮೇಲೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

14 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

14 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago