Advertisement
ಜಿಲ್ಲೆ

ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಬೆಳೆಗಾರರ ಒಕ್ಕೂಟ

Share

ಮಡಿಕೇರಿ : ಕಾಫಿ ಕೃಷಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರದ ವಾಣಿಜ್ಯ ಸಚಿವ ಮತ್ತು ರಸಗೊಬ್ಬರ ಖಾತೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಸಂಬಂಧಿತ ಮನವಿ ಸಲ್ಲಿಸಿದೆ. ಬೆಳೆಗಾರರಿಗೆ ಅಗತ್ಯವಾಗಿರುವ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕದ ಕಾಫಿ ಜಿಲ್ಲೆಗಳ ಸಂಸದರ ನೇತೃತ್ವದಲ್ಲಿನ ಬೆಳೆಗಾರರ ನಿಯೋಗವು ಸಚಿವರನ್ನು ಒತ್ತಾಯಿಸಿದೆ.

Advertisement
Advertisement

ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್.ಬಕ್ಕರವಳ್ಳಿ, ಉಪಾಧ್ಯಕ್ಷರಾದ ನಂದಾಬೆಳ್ಳಿಯಪ್ಪ, ಡಿ.ಎಂ.ವಿಜಯ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ಅವರುಗಳನ್ನು ಒಳಗೊಂಡ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸಸ್ ಸದಸ್ಯರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಪ್ರಜ್ವಲ್ ರೇವಣ್ಣ, ಪಿ.ಸಿ.ಮೋಹನ್ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಎನ್.ಪಿ.ಕೆ.  ಹಾಗೂ ಮೈಕ್ರೋನ್ಯೂಟ್ರಿಯಂಟ್ ಗಳನ್ನು ಒಳಗೊಂಡಿರುವ ಕಾಫಿ ವಿಶೇಷ ಗೊಬ್ಬರಕ್ಕಾಗಿ ಮನವಿ ಪತ್ರವನ್ನು ಸಲ್ಲಿಸಿ ನಿಯೋಗದಿಂದ ಚರ್ಚಿಸಿತು.

Advertisement

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಯೋಗವು ಕಳೆದ ವರ್ಷ ಮಹಾಮಳೆಯಿಂದಾಗಿ ಕಾಫಿ ಬೆಳೆ ಮತ್ತು ಆಸ್ತಿ ಹಾನಿ ತೀವ್ರವಾಗಿ ಉಂಟಾಗಿದ್ದು  ಕೃಷಿಕರು ಸಂಕಷ್ಟು ಎದುರಿಸುತ್ತಿದ್ದಾರೆ. ಆ ನಂತರದ 160 ದಿನಗಳ ಬರಗಾಲದಿಂದಾಗಿ ಮುಂದಿನ ವರ್ಷಗಳಲ್ಲಿ ಬೆಳೆನಷ್ಟವಾಗುವ ಎಲ್ಲಾ ಸಾಧ್ಯತೆಗಳಿದೆ. 26 ವರ್ಷಗಳಿಗೆ ಹೋಲಿಸಿದರೆ ಈಗ ಕಾಫಿ ಬೆಲೆ ಅತ್ಯಂತ ಕಡಮೆಯಾಗಿದೆ. 30 ಜೂನ್ 2019 ಕ್ಕೆ ಅನ್ವಯಿಸುವಂತೆ ಕಾಫಿ ಸಾಲದ ಮೇಲೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿತು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

13 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

14 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

14 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

14 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

16 hours ago