Advertisement
ಜಿಲ್ಲೆ

ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಬೆಳೆಗಾರರ ಒಕ್ಕೂಟ

Share

ಮಡಿಕೇರಿ : ಕಾಫಿ ಕೃಷಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರದ ವಾಣಿಜ್ಯ ಸಚಿವ ಮತ್ತು ರಸಗೊಬ್ಬರ ಖಾತೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಸಂಬಂಧಿತ ಮನವಿ ಸಲ್ಲಿಸಿದೆ. ಬೆಳೆಗಾರರಿಗೆ ಅಗತ್ಯವಾಗಿರುವ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕದ ಕಾಫಿ ಜಿಲ್ಲೆಗಳ ಸಂಸದರ ನೇತೃತ್ವದಲ್ಲಿನ ಬೆಳೆಗಾರರ ನಿಯೋಗವು ಸಚಿವರನ್ನು ಒತ್ತಾಯಿಸಿದೆ.

ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್.ಬಕ್ಕರವಳ್ಳಿ, ಉಪಾಧ್ಯಕ್ಷರಾದ ನಂದಾಬೆಳ್ಳಿಯಪ್ಪ, ಡಿ.ಎಂ.ವಿಜಯ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ಅವರುಗಳನ್ನು ಒಳಗೊಂಡ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸಸ್ ಸದಸ್ಯರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಪ್ರಜ್ವಲ್ ರೇವಣ್ಣ, ಪಿ.ಸಿ.ಮೋಹನ್ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಎನ್.ಪಿ.ಕೆ.  ಹಾಗೂ ಮೈಕ್ರೋನ್ಯೂಟ್ರಿಯಂಟ್ ಗಳನ್ನು ಒಳಗೊಂಡಿರುವ ಕಾಫಿ ವಿಶೇಷ ಗೊಬ್ಬರಕ್ಕಾಗಿ ಮನವಿ ಪತ್ರವನ್ನು ಸಲ್ಲಿಸಿ ನಿಯೋಗದಿಂದ ಚರ್ಚಿಸಿತು.

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಯೋಗವು ಕಳೆದ ವರ್ಷ ಮಹಾಮಳೆಯಿಂದಾಗಿ ಕಾಫಿ ಬೆಳೆ ಮತ್ತು ಆಸ್ತಿ ಹಾನಿ ತೀವ್ರವಾಗಿ ಉಂಟಾಗಿದ್ದು  ಕೃಷಿಕರು ಸಂಕಷ್ಟು ಎದುರಿಸುತ್ತಿದ್ದಾರೆ. ಆ ನಂತರದ 160 ದಿನಗಳ ಬರಗಾಲದಿಂದಾಗಿ ಮುಂದಿನ ವರ್ಷಗಳಲ್ಲಿ ಬೆಳೆನಷ್ಟವಾಗುವ ಎಲ್ಲಾ ಸಾಧ್ಯತೆಗಳಿದೆ. 26 ವರ್ಷಗಳಿಗೆ ಹೋಲಿಸಿದರೆ ಈಗ ಕಾಫಿ ಬೆಲೆ ಅತ್ಯಂತ ಕಡಮೆಯಾಗಿದೆ. 30 ಜೂನ್ 2019 ಕ್ಕೆ ಅನ್ವಯಿಸುವಂತೆ ಕಾಫಿ ಸಾಲದ ಮೇಲೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

1 minute ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

9 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

18 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 day ago