Advertisement
ನಮ್ಮೂರ ಸುದ್ದಿ

ಕಾಮಗಾರಿ ಪ್ರಾರಂಭವಾಗಿ ವರ್ಷವಾದರೂ ಪೂರ್ತಿಯಾಗಿಲ್ಲ …! ಇದೆಂತ ಪಂಚವಾರ್ಷಿಕ ಯೋಜನೆಯಾ ಮಾರಾಯ್ರೆ….!

Share

ಮಡಪ್ಪಾಡಿ: ಒಂದು ಸಣ್ಣ ಸೇತುವೆ ನಿರ್ಮಾಣ. ಅಂದಾಜು ಒಂದು ವರ್ಷ ಆಯ್ತು ಮಾರಾಯ್ರೆ ಶುರು ಮಾಡಿ. ಇನ್ನೂ ಮುಗೀಲಿಲ್ಲ..!. ಯಾರೂ ಕೇಳುವವರು ಇಲ್ವಾ ? ಇಂಜಿನಿಯರ್ ಅಂತ ಇದ್ದಾರಾ ಇದಕ್ಕೆ ? ಬಿಲ್ ಪಾಸ್ ಆಗುತ್ತಾ ಹೀಗಾದರೆ ? ಜನರಿಂದ ಆಯ್ಕೆಯಾದವರೂ ಇದನ್ನು ನೋಡೋದಿಲ್ವಾ ? ಅಷ್ಟೂ ಅಲ್ಲ, ಇದೆಂತ ಪಂಚ ವಾರ್ಷಿಕ ಯೋಜನೆಯಾ ? ಹೀಗೆಲ್ಲಾ ಪ್ರಶ್ನೆ ಬರುವುದು  ಮಡಪ್ಪಾಡಿಯಲ್ಲಿ.

ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಡಪ್ಪಾಡಿಯಿಂದ ಹಾಡಿಕಲ್ಲಿಗೆ ಹೋಗುವ ರಸ್ತೆ ಇದು. ಇದರ ಕತೆ ಹೇಳುವಾಗಲೇ ಇಲ್ಲೊಂದು ಸೇತುವೆ ಬರುತ್ತದೆ. ಮಳೆಗಾಲ ಕಷ್ಟವಾಗುತ್ತೆ ಸಾಗಲು ಅಂತ ಸೇತುವೆ ಮಂಜೂರಾಯ್ತು. ಅದು ಬಾಜಿನಡ್ಕ  ತೋಡಿಗೆ ನಿರ್ಮಾಣ ಮಾಡಲಾಗುತ್ತಿರುವ ಸೇತುವೆ ಅದು. ಸರಿ ಸುಮಾರು ಒಂದು ವರ್ಷವಾಗಿರಬಹುದು ನಿರ್ಮಾಣ ಮಾಡಲು ಶುರು ಮಾಡಿ. ಇಂದಿಗೂ ಕಬ್ಬಿಣ ಮೇಲೆ ಕಾಣುತ್ತಿದೆ, ಕಾಂಕ್ರೀಟ್ ಕೆಲಸ ಮುಗಿದಿಲ್ಲ. ಇನ್ನೀಗ ಮಳೆಗಾಲ ಆರಂಭವಾಗುತ್ತದೆ, ಮಳೆ ಆರಂಭವಾದ ಮೇಲೆ ಹೇಗೆ ಕೆಲಸ ಮಾಡುವುದು  ಇತ್ಯಾದಿ ಪ್ರಶ್ನೆಗಳೆಲ್ಲಾ ಜನರಿಗೆ ಇದೆ. ಆದರೆ ಇದು  ಅಧಿಕಾರಿಗಳಿಗೆ  ಈ ಪ್ರಶ್ನೆ ಬರೋದಿಲ್ವಾ ಎಂಬುದು ಪ್ರಶ್ನೆ.

 

 

ಇಲ್ಲಿ ಅನುದಾನದ ಕೊರತೆ ಇದೆಯೇ ಅಥವಾ ಗುತ್ತಿಗೆದಾರರಿಗೆ ಬೇರೆ ಕಡೆ ಕೆಲಸ ಇದೆಯೇ ಅದೆಲ್ಲಾ ಎರಡನೆಯದು. ಒಂದು ಕೆಲಸ ಆರಂಭವಾಗುವ ಮುನ್ನವೇ ಅನುದಾನದ ವ್ಯವಸ್ಥೆಯೂ ಆಗದೇ ಇದ್ದರೆ ಎಲ್ಲಾ ಕಾಮಗಾರಿಗಳೂ ಇದೇ ಮಾದರಿಯಾಗಿ ಇದ್ದ ಹಣವೂ ಪೋಲಾಗುವುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಗಮನಹರಿಸಲೇಬೇಕು, ಏಕೆಂದರೆ ಇದು ಜನರ ದುಡ್ಡು. ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಕ್ರೀಟ್ ಹಾಕಲು ಸಿದ್ಧವಾಗಿರುವ ಕಬ್ಬಿಣದ ರಾಡ್ ಮಳೆಗಾಲದಲ್ಲಿ ತುಕ್ಕು ಹಿಡಿದರೆ ನಂತರ ಕಾಮಗಾರಿ ಗುಣಮಟ್ಟದಿಂದ ಕೂಡಿರಬಹುದೇ ? ಕಬ್ಬಿಣದ ರಾಡ್ ಮುಂದೆ ಅಪಾಯವೂ ತರಬಲ್ಲುದಲ್ಲೇ ? ಹೀಗೆಲ್ಲಾ ಅತ್ಯಂತ ಬೇಸಿಕ್ ಪ್ರಶ್ನೆ ಜನರು ಕೇಳುತ್ತಾರೆ. ಇದೆಲ್ಲಾ  ಆ ಇಲಾಖೆಗೆ ತಿಳಿಯುವುದಿಲ್ವೇ ಎಂದು ಜನ ಕೇಳುತ್ತಾರೆ.

 

ಮಡಪ್ಪಾಡಿಯಿಂದ ಹಾಡಿಕಲ್ಲಿಗೆ ಹೋಗುವ ಬಾಜಿನಡ್ಕ ತೋಡಿಗೆ ನಿರ್ಮಾಣವಾಗುತ್ತಿರುವ ಕೆಲಸ ಸೇತುವೆ ಬೇಗನೆ ಮುಗಿಯಬೇಕು ಎನ್ನುತ್ತಾರೆ ಸ್ಥಳೀಯರಾದ ಜಯಂತ್ ದೇವಸ್ಯ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

4 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

4 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

18 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

18 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

23 hours ago