ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…