ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…