ಪುತ್ತೂರು: ಡಾ. ಶಿವರಾಮ ಕಾರಂತರು ಹಿಂದೆಂದಿಗಿಂತಲೂ ಕಾರಂತರು ಈಗ ಹೆಚ್ಚು ಪ್ರಸ್ತುತ. ಜಾತಿ, ಧರ್ಮ, ಭಾಷೆ, ಲಿಂಗಗಳ ಹೆಸರಿನಲ್ಲಿ ಮನುಷ್ಯರನ್ನು ಒಡೆಯುವ ರಾಜಕಾರಣ ಮಾಡುವ ಕಾಲದಲ್ಲಿ ಕಾರಂತರಂಥ ಪ್ರತ್ಯೇಕತಾವಾದಿಯಲ್ಲದ ಏಕತಾವಾದಿ ಪ್ರಸ್ತುತರಾಗುತ್ತಾರೆ ಎಂದು ಕವಿ ಜಯಂತ ಕಾಯ್ಕಿಣಿ ಹೇಳಿದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆ ಬೆಂಗಳೂರು, ಶಿವರಾಮ ಕಾರಂತ ಬಾಲವನ ಪುತ್ತೂರು ಮತ್ತು ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಬಾಲವನದಲ್ಲಿ ನಡೆದ ಡಾ.ಕೆ.ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಬಾಲವನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಸಿಂಧೂ ವಿ. ರೂಪೇಶ್, ಕಾರಂತರ ಪುತ್ರಿ ಕ್ಷಮಾ ರಾವ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ.ವಿ, ಪುತ್ತೂರು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ವಿಶ್ರಾಂತ ಪ್ರಾಂಶುಪಾಲ ಡಾ. ಮಾಧವ ಭಟ್, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಸವಣೂರು ಸೀತಾರಾಮ ರೈ, ರಾಜ್ಯ ಸಮಿತಿ ಸದಸ್ಯ ಐ.ಕೆ.ಬೊಳುವಾರ್, ತಹಸೀಲ್ದಾರ್ ಅನಂತ ಶಂಕರ್, ತಾಪಂ ಇಒ ನವೀನ್ ಭಂಡಾರಿ ಉಪಸ್ಥಿತರಿದ್ದರು.
ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಸ್ವಾಗತಿಸಿದರು, ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ.ಎಚ್.ಜಿ.ಶ್ರೀಧರ್ ಕಾರ್ಯಕ್ರಮ ನಿರ್ವಹಿಸಿದರು.
ಉದ್ಘಾಟನೆ:
ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮತ್ತು ಬಾಲವಿಜ್ಞಾನಿ ಅಮನ್ ಕೆ.ಎ. ಅವರನ್ನು ಸನ್ಮಾನಿಸಲಾಯಿತು. ಕಾರಂತರು ಮತ್ತು ಪರಿಸರ ವಿಚಾರ ಗೋಷ್ಠಿಯಲ್ಲಿ ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಕಾರಂತರನ್ನು ತೆರೆದಿಟ್ಟರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…