ಜುಲೈ 26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |
ಭಾರತದ ಗಡಿಯೊಳಗೆ ನುಗ್ಗಿದ ಪಾಕ್ ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.
1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ ಪಾಕ್ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಜಲೈ26 ರಂದು ಉಗ್ರರನ್ನು ಮತ್ತು ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…