ಜುಲೈ 26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |
ಭಾರತದ ಗಡಿಯೊಳಗೆ ನುಗ್ಗಿದ ಪಾಕ್ ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.
1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ ಪಾಕ್ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಜಲೈ26 ರಂದು ಉಗ್ರರನ್ನು ಮತ್ತು ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…