Advertisement
MIRROR FOCUS

ಕಾರ್ಗಿಲ್‌ ವಿಜಯ ದಿವಸ್‌ | ವೀರ ಯೋಧರಿಗೆ ಶತ ಶತ ನಮನ |

Share

ಜುಲೈ  26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |


ಭಾರತದ ಗಡಿಯೊಳಗೆ ನುಗ್ಗಿದ ಪಾಕ್‌  ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ  ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ  ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ‌ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.

 

 

1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು  ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ  ಪಾಕ್ ​ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್‌ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು  ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ  ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು.  ಜಲೈ26 ರಂದು ಉಗ್ರರನ್ನು ಮತ್ತು ಪಾಕ್​ ಸೈನಿಕರನ್ನು  ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

15 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

15 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

15 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago