ಜುಲೈ 26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |
ಭಾರತದ ಗಡಿಯೊಳಗೆ ನುಗ್ಗಿದ ಪಾಕ್ ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.
1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ ಪಾಕ್ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಜಲೈ26 ರಂದು ಉಗ್ರರನ್ನು ಮತ್ತು ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…