ಜುಲೈ 26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |
ಭಾರತದ ಗಡಿಯೊಳಗೆ ನುಗ್ಗಿದ ಪಾಕ್ ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.
1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ ಪಾಕ್ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಜಲೈ26 ರಂದು ಉಗ್ರರನ್ನು ಮತ್ತು ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…