ಕಾರ್ತಿಕ ಹುಣ್ಣಿಮೆಯ ಬಳಿಕ ಸುಬ್ರಹ್ಮಣ್ಯದಲ್ಲಿ ಸಂಭ್ರಮ : ರಥ ಅಲಂಕಾರಕ್ಕೆ ಚಾಲನೆ

November 13, 2019
2:06 PM

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳು ನಡೆಯಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ನಡೆದ ಬಳಿಕ ರಥಗಳ ಗೂಟಗಳಿಗೆ ಪೂಜೆ ನಡೆಯಿತು.

Advertisement
Advertisement

ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರಥದದ ದಾನಿ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ,ರಥದ ದಾನಿ ಖ್ಯಾತ ಉದ್ಯಮಿ ಎನ್.ಮುತ್ತಪ್ಪ ರೈ ಅವರ ಸಹೋದರ ಕರುಣಾಕರ ರೈ ದೇರ್ಲ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಐತಪ್ಪ ಅರಿಗುಡಿ, ಸಹಗುರಿಕಾರ ದಿನಕರ ಕುಲ್ಕುಂದ ಕಾಲನಿ, ಪ್ರಮುಖರಾದ ಎ.ವಿ.ನಾಗೇಶ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group