ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳು ನಡೆಯಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ನಡೆದ ಬಳಿಕ ರಥಗಳ ಗೂಟಗಳಿಗೆ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರಥದದ ದಾನಿ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ,ರಥದ ದಾನಿ ಖ್ಯಾತ ಉದ್ಯಮಿ ಎನ್.ಮುತ್ತಪ್ಪ ರೈ ಅವರ ಸಹೋದರ ಕರುಣಾಕರ ರೈ ದೇರ್ಲ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಐತಪ್ಪ ಅರಿಗುಡಿ, ಸಹಗುರಿಕಾರ ದಿನಕರ ಕುಲ್ಕುಂದ ಕಾಲನಿ, ಪ್ರಮುಖರಾದ ಎ.ವಿ.ನಾಗೇಶ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…