ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳು ನಡೆಯಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ನಡೆದ ಬಳಿಕ ರಥಗಳ ಗೂಟಗಳಿಗೆ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರಥದದ ದಾನಿ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ,ರಥದ ದಾನಿ ಖ್ಯಾತ ಉದ್ಯಮಿ ಎನ್.ಮುತ್ತಪ್ಪ ರೈ ಅವರ ಸಹೋದರ ಕರುಣಾಕರ ರೈ ದೇರ್ಲ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಐತಪ್ಪ ಅರಿಗುಡಿ, ಸಹಗುರಿಕಾರ ದಿನಕರ ಕುಲ್ಕುಂದ ಕಾಲನಿ, ಪ್ರಮುಖರಾದ ಎ.ವಿ.ನಾಗೇಶ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…