ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳು ನಡೆಯಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ನಡೆದ ಬಳಿಕ ರಥಗಳ ಗೂಟಗಳಿಗೆ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರಥದದ ದಾನಿ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ,ರಥದ ದಾನಿ ಖ್ಯಾತ ಉದ್ಯಮಿ ಎನ್.ಮುತ್ತಪ್ಪ ರೈ ಅವರ ಸಹೋದರ ಕರುಣಾಕರ ರೈ ದೇರ್ಲ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಐತಪ್ಪ ಅರಿಗುಡಿ, ಸಹಗುರಿಕಾರ ದಿನಕರ ಕುಲ್ಕುಂದ ಕಾಲನಿ, ಪ್ರಮುಖರಾದ ಎ.ವಿ.ನಾಗೇಶ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…