ಕಾರ್ಮಿಕರ ಪ್ರತಿಭಟನೆಗೆ ಸುಳ್ಯದಿಂದಲೂ ಭಾಗಿ

September 14, 2019
9:59 AM

ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

Advertisement
Advertisement

ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group