ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…