ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…