ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…