ಸುದ್ದಿಗಳು

ಕಾರ್ಮಿಕರ ಪ್ರತಿಭಟನೆಗೆ ಸುಳ್ಯದಿಂದಲೂ ಭಾಗಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

Advertisement

ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

3 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

10 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

15 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

16 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago