ಧರ್ಮಸ್ಥಳ : ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು. ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…