ಧರ್ಮಸ್ಥಳ : ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು. ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…