ಧರ್ಮಸ್ಥಳ : ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು. ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…