ಧರ್ಮಸ್ಥಳ : ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು. ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…