ಸುಳ್ಯ: ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ, ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ಮರು ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಸುಳ್ಯ ತಾಲೂಕು ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘನೆಯ ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ಕಟ್ಟಡ ಕಾರ್ಮಿಕರ ಶ್ರೇಯಾಭಿವೃದ್ಧಿಗೆ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹಗೊಂಡ ಹಣವನ್ನು ಕಟ್ಟಡ ಕಾರ್ಮಿಕರ ಅಗತ್ಯತೆಗಳಿಗಲ್ಲದೆ ಬೇರೆ ಯಾವುದೇ ವಿಚಾರಗಳಿಗೆ ಬಳಕೆ ಮಾಡಬಾರದು ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್. ಕೆ. ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…