ಸುಳ್ಯ: ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ, ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ಮರು ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಸುಳ್ಯ ತಾಲೂಕು ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘನೆಯ ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ಕಟ್ಟಡ ಕಾರ್ಮಿಕರ ಶ್ರೇಯಾಭಿವೃದ್ಧಿಗೆ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹಗೊಂಡ ಹಣವನ್ನು ಕಟ್ಟಡ ಕಾರ್ಮಿಕರ ಅಗತ್ಯತೆಗಳಿಗಲ್ಲದೆ ಬೇರೆ ಯಾವುದೇ ವಿಚಾರಗಳಿಗೆ ಬಳಕೆ ಮಾಡಬಾರದು ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್. ಕೆ. ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…