ಸುಳ್ಯ: ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ, ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ಮರು ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಸುಳ್ಯ ತಾಲೂಕು ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘನೆಯ ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ಕಟ್ಟಡ ಕಾರ್ಮಿಕರ ಶ್ರೇಯಾಭಿವೃದ್ಧಿಗೆ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹಗೊಂಡ ಹಣವನ್ನು ಕಟ್ಟಡ ಕಾರ್ಮಿಕರ ಅಗತ್ಯತೆಗಳಿಗಲ್ಲದೆ ಬೇರೆ ಯಾವುದೇ ವಿಚಾರಗಳಿಗೆ ಬಳಕೆ ಮಾಡಬಾರದು ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್. ಕೆ. ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…