ಕಾಲೇಜು ವಿದ್ಯಾರ್ಥಿಗಳಿಗೆ ಜೀವನ ಪಾಠ ಕಲಿಸಿದ ಗದ್ದೆಯಲ್ಲೊಂದು ದಿನ

August 1, 2019
8:00 PM

ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ನೇಜಿನಾಟಿ ಹಾಗೂ ಭತ್ತದ ಕೃಷಿಯ ಕುರಿತು ಪ್ರಾತ್ಯಕ್ಷಿಕೆ ನೀಡುವ ಗದ್ದೆಯಲ್ಲೊಂದು ದಿನ ಕಾರ್ಯಕ್ರಮ  ಪಾಲ್ತಾಡಿ ಗ್ರಾಮದ ಲಕ್ಷ್ಮೀ ರೈ ಚೆನ್ನಾವರ ಪಟ್ಟೆ ಅವರ ಗದ್ದೆಯಲ್ಲಿ ನಡೆಯಿತು.

Advertisement
Advertisement

ಈ ಸಂದರ್ಭ ಮಾತನಾಡಿದ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಂಘಟಕ ವೆಂಕಟ್ರಮಣ ನಾೈಕ್ , ಇಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಅಳಿದುಹೋಗಿ ಪುಸ್ತಕದಲ್ಲಿ ತೋರಿಸುವ ಪರಿಸ್ಥಿತಿ ಬಂದೊದಗಿದೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ನಾಟಿ ಕ್ರಮದ ಬಗ್ಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಸಹಕಾರಿ ಎಂದರು.ಆಧುನಿಕತೆ ಬೆಳೆದಂತೆ ಕೃಷಿಪರಂಪರೆಯನ್ನು ಮರೆಯುತ್ತಿರುವ ಸಂದರ್ಭದಲ್ಲಿ ಭತ್ತದ ಬೇಸಾಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯೂ ದೊರೆತಂತಾಯಿತು.ವಿದ್ಯಾರ್ಥಿಗಳು ಕೆಸರಗದ್ದೆಯಲ್ಲಿ ಮಿಂದೆದ್ದು ಆಟವಾಡಿದರು.

Advertisement

ಕಾಲೇಜಿನಲ್ಲಿ ದ.ಕ. ಮಾತ್ರವಲ್ಲದೆ ಹೊರಜಿಲ್ಲೆಗಳ ವಿದ್ಯಾರ್ಥಿಗಳಿದ್ದು,ಅವರೂ ಗದ್ದೆಗೆ ಇಳಿದು ನೇಜಿ ನೆಟ್ಟು ಸಂಭ್ರಮಿಸಿದರು. ಬಳಿಕ ಪರಂಪರಾಗತ ಭತ್ತದ ಕೃಷಿಕ ಇಸುಬು ಕುಂಡಡ್ಕ ಅವರಿಂದ ಭತ್ತದ ನಾಟಿ,ಬೆಳೆಯ ಕುರಿತು ಮಾಹಿತಿ ಪಡೆದುಕೊಂಡರು.ನಂತರ ವಿದ್ಯಾರ್ಥಿಗಳು ಸಾಲು ನಾಟಿಯ ಮೂಲಕ ನೇಜಿ ನಾಟಿ ಮಾಡಿದರು.

ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಘಟಕದ ಸಹಸಂಘಟಕರಾದ ಪ್ರತಿಭಾ ಎಸ್ ,ಸುಮಾ,ಶಿವಪ್ರಸಾದ್,ಅನೂಪ್, ಅಭ್ಯುದಯ ಯುವಕ ಮಂಡಲದ ಪದಾಧಿಕಾರಿಗಳಾದ ಸುಬ್ಬಣ್ಣ ದಾಸ್,ದೀಕ್ಷಿತ್ ಜೈನ್,ರವಿ ಎ.ಕೆ,ಹರೀಶ್ ರೈ,ಧರ್ಮಪಾಲ,ಮಹಮ್ಮದ್ ಶರೀಫ್ ಕುಂಡಡ್ಕ, ಪ್ರವೀಣ್ ಕುಮಾರ್,ವಿನೋದ್ ,ಪ್ರಮೋದ್ ಕೆ,ಚರಣ್ ರೈ ,ಜಗದೀಶ್,ಅಭ್ಯುದಯ ಮಹಿಳಾ ಮಂಡಲದ ಸುಶೀಲಾ ಸಿ.ವಿ ರೈ, ವಿನೋದಾ ರೈ,ಶೀಲಾವತಿ,ಗುಲಾಬಿ ಸಿ.ಕೆ,ನಳಿನಿ ರೈ,ಚಿತ್ರಾ ವಸಂತ್ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror