ಸುಳ್ಯ: ಕೊರೊನದಿಂದ ಜನಸಾಮಾನ್ಯರು ಆರ್ಥಿಕವಾಗಿ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪೂರ್ಣ ಪ್ರಮಾಣದ ಫೀಸು ಜುಲೈ 31 ರ ಒಳಗಾಗಿ ಕಟ್ಟಬೇಕೆಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುತ್ತೋಲೆ ಹೊರಡಿಸಿದೆ.
ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳಿಗೆ ಯಾವುದೇ ಸ್ಕಾಲರ್ಶಿಪ್ ಅಥವಾ ಅರಿವು ಲೋನ್ ಬಂದಿಲ್ಲ, ಅದರೊಂದಿಗೆ ಹೆತ್ತವರಿಗೆ ಉದ್ಯೋಗವೂ ಇಲ್ಲ. ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಫೀಸ್ ಕಟ್ಟಲು ಈಗಾಗಲೇ ಹೊರಡಿಸಿರುವ ದಿನಾಂಕವನ್ನು ಮುಂದೂಡಬೇಕು ಮತ್ತು ಸೂಕ್ತ ಸಮಯಾಕಾಶವನ್ನು ನೀಡಬೇಕೆಂದು ಎನ್ ಎಸ್ ಯುಐ ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಆಶೀಕ್ ಅರಂತೋಡು ರವರ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಯತೀಶ್ ಉಳ್ಳಾಳ್, ತಹಶೀಲ್ದಾರ್ ಅನಂತಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕರು ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕರವರಿಗೆ ಎನ್ ಎಸ್ ಯುಐ ವತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ,ಎನ್ ಎಸ್ ಯುಐ ಉಪಾಧ್ಯಕ್ಷ ಕೀರ್ತನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಾಝಿಲ್, ಅಫ್ನಾನ್ ಅರಂಬೂರ್ ಉಪಸ್ಥಿತರಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…