Advertisement
ನಮ್ಮೂರ ಸುದ್ದಿ

ಕಾವಿನಮೂಲೆ ಬಸ್‍ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ

Share

ಬೆಳ್ಳಾರೆ: ಕಳೆದ 3 ವರ್ಷಗಳಿಂದ ಈ ಪ್ರಯಾಣಿಕರ ಬಸ್ ತಂಗುದಾಣಕ್ಕೆ ಮರದ ಕಂಬವೇ ಆಧಾರವಾಗಿದೆ. ಶೀಘ್ರವೇ ಈ ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ.

ಬೆಳ್ಳಾರೆ- ಸುಳ್ಯ ರಸ್ತೆಯ ಕಾವಿನಮೂಲೆಯಲ್ಲಿ ಇರುವ ಪ್ರಯಾಣಿಕರ ಬಸ್ ತಂಗುದಾಣವನ್ನು ಕಳೆದ ಮೂರು ವರ್ಷಗಳಿಂದ ಮರದ ಕಂಬವೇ ಆಧರಿಸಿ ನಿಂತಿದೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆಯಿಂದ ಸುಳ್ಯಕ್ಕೆ ಸಾಗುವ ಮುಖ್ಯ ರಸ್ತೆಯ ಕೇವಲ ಒಂದು ಕಿ.ಮಿ ದೂರದಲ್ಲಿ ಈ ದುರಾವಸ್ಥೆಯ ಬಸ್‍ತಂಗುದಾಣವಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಶ್ರಯಿಸುವ ತಾಣವಿದು. ಆದರೆ ಈಗ ತಂಗುದಾಣವೇ ಭಯಕ್ಕೆ ಕಾರಣವಾಗಿದೆ.

ಮೂರು ವರ್ಷಗಳ ಹಿಂದೆ ತಂಗುದಾಣದ ಛಾವಣಿಗೆ ಅಳವಡಿಸಿದ್ದ ಮರದ ಪಕ್ಕಾಸು ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿತ್ತು. ಇದನ್ನು ಗಮನಿಸಿದ್ದ ಸ್ಥಳೀಯರು ಛಾವಣಿಗೆ ತಾತ್ಕಾಲಿಕ ಎಂಬಂತೆ ಕಂಬವೊಂದನ್ನು ಆಧಾರವಾಗಿ ಇಟ್ಟಿದ್ದಾರೆ. ಆದರೆ ಅದೇ ಪರ್ಮನೆಂಟಾಗಿ ಈಗ ಶಿಥಿಲಾವಸ್ಥೆಗೆ ತಲಪಿದೆ. ಗಾಳಿ ಮಳೆಗೆ ತಂಗುದಾಣದ ಛಾವಣಿ ಪೂರ್ಣವಾಗಿ ಕುಸಿದು ಬೀಳುವ ಅಪಾಯವಿದ್ದು, ಮೂರು ವರ್ಷಗಳು ಸಂದರೂ ದುರಸ್ಥಿ ಆಗದೇ ಇರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳಿಯರಾದ ಪ್ರವೀಣ್ ಕಾವಿನಮೂಲೆ ಮಾತನಾಡುತ್ತಾ, ” ಮೂರು ವರ್ಷಗಳಿಂದ ದುರಸ್ಥಿಗೊಳಿಸದೆ ಇರುವುದು ಆಡಳಿತ ವರ್ಗದ ನಿರ್ಲಕ್ಷ್ಯ ತೋರಿಸುತ್ತದೆ. ಮಳೆಗಾಲದ ಮೊದಲು ದುರಸ್ಥಿಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಳ್ಳಾರೆ ಗ್ರಾಪಂ ಪಿಡಿಒ ಧನಂಜಯ ಕೆ ಆರ್, ” ತಂಗುದಾಣವನ್ನು ಪರಿಶೀಲಿಸಿ ದುರಸ್ಥಿಯ ಬಗ್ಗೆ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು. ಬೀಳುವ ಸ್ಥಿತಿಯಲ್ಲಿದ್ದರೆ ತಕ್ಷಣ ಸರಿಪಡಿಸಲಾಗುವುದು.” ಎನ್ನುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

4 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

9 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

20 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago