Advertisement
ನಮ್ಮೂರ ಸುದ್ದಿ

ಕಾವಿನಮೂಲೆ ಬಸ್‍ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ

Share

ಬೆಳ್ಳಾರೆ: ಕಳೆದ 3 ವರ್ಷಗಳಿಂದ ಈ ಪ್ರಯಾಣಿಕರ ಬಸ್ ತಂಗುದಾಣಕ್ಕೆ ಮರದ ಕಂಬವೇ ಆಧಾರವಾಗಿದೆ. ಶೀಘ್ರವೇ ಈ ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ.

Advertisement
Advertisement

ಬೆಳ್ಳಾರೆ- ಸುಳ್ಯ ರಸ್ತೆಯ ಕಾವಿನಮೂಲೆಯಲ್ಲಿ ಇರುವ ಪ್ರಯಾಣಿಕರ ಬಸ್ ತಂಗುದಾಣವನ್ನು ಕಳೆದ ಮೂರು ವರ್ಷಗಳಿಂದ ಮರದ ಕಂಬವೇ ಆಧರಿಸಿ ನಿಂತಿದೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆಯಿಂದ ಸುಳ್ಯಕ್ಕೆ ಸಾಗುವ ಮುಖ್ಯ ರಸ್ತೆಯ ಕೇವಲ ಒಂದು ಕಿ.ಮಿ ದೂರದಲ್ಲಿ ಈ ದುರಾವಸ್ಥೆಯ ಬಸ್‍ತಂಗುದಾಣವಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಶ್ರಯಿಸುವ ತಾಣವಿದು. ಆದರೆ ಈಗ ತಂಗುದಾಣವೇ ಭಯಕ್ಕೆ ಕಾರಣವಾಗಿದೆ.

Advertisement

ಮೂರು ವರ್ಷಗಳ ಹಿಂದೆ ತಂಗುದಾಣದ ಛಾವಣಿಗೆ ಅಳವಡಿಸಿದ್ದ ಮರದ ಪಕ್ಕಾಸು ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿತ್ತು. ಇದನ್ನು ಗಮನಿಸಿದ್ದ ಸ್ಥಳೀಯರು ಛಾವಣಿಗೆ ತಾತ್ಕಾಲಿಕ ಎಂಬಂತೆ ಕಂಬವೊಂದನ್ನು ಆಧಾರವಾಗಿ ಇಟ್ಟಿದ್ದಾರೆ. ಆದರೆ ಅದೇ ಪರ್ಮನೆಂಟಾಗಿ ಈಗ ಶಿಥಿಲಾವಸ್ಥೆಗೆ ತಲಪಿದೆ. ಗಾಳಿ ಮಳೆಗೆ ತಂಗುದಾಣದ ಛಾವಣಿ ಪೂರ್ಣವಾಗಿ ಕುಸಿದು ಬೀಳುವ ಅಪಾಯವಿದ್ದು, ಮೂರು ವರ್ಷಗಳು ಸಂದರೂ ದುರಸ್ಥಿ ಆಗದೇ ಇರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳಿಯರಾದ ಪ್ರವೀಣ್ ಕಾವಿನಮೂಲೆ ಮಾತನಾಡುತ್ತಾ, ” ಮೂರು ವರ್ಷಗಳಿಂದ ದುರಸ್ಥಿಗೊಳಿಸದೆ ಇರುವುದು ಆಡಳಿತ ವರ್ಗದ ನಿರ್ಲಕ್ಷ್ಯ ತೋರಿಸುತ್ತದೆ. ಮಳೆಗಾಲದ ಮೊದಲು ದುರಸ್ಥಿಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಬೆಳ್ಳಾರೆ ಗ್ರಾಪಂ ಪಿಡಿಒ ಧನಂಜಯ ಕೆ ಆರ್, ” ತಂಗುದಾಣವನ್ನು ಪರಿಶೀಲಿಸಿ ದುರಸ್ಥಿಯ ಬಗ್ಗೆ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು. ಬೀಳುವ ಸ್ಥಿತಿಯಲ್ಲಿದ್ದರೆ ತಕ್ಷಣ ಸರಿಪಡಿಸಲಾಗುವುದು.” ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

16 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

18 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago