Advertisement
ನಮ್ಮೂರ ಸುದ್ದಿ

ಕಾವಿನಮೂಲೆ ಬಸ್‍ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ

Share

ಬೆಳ್ಳಾರೆ: ಕಳೆದ 3 ವರ್ಷಗಳಿಂದ ಈ ಪ್ರಯಾಣಿಕರ ಬಸ್ ತಂಗುದಾಣಕ್ಕೆ ಮರದ ಕಂಬವೇ ಆಧಾರವಾಗಿದೆ. ಶೀಘ್ರವೇ ಈ ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ.

ಬೆಳ್ಳಾರೆ- ಸುಳ್ಯ ರಸ್ತೆಯ ಕಾವಿನಮೂಲೆಯಲ್ಲಿ ಇರುವ ಪ್ರಯಾಣಿಕರ ಬಸ್ ತಂಗುದಾಣವನ್ನು ಕಳೆದ ಮೂರು ವರ್ಷಗಳಿಂದ ಮರದ ಕಂಬವೇ ಆಧರಿಸಿ ನಿಂತಿದೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆಯಿಂದ ಸುಳ್ಯಕ್ಕೆ ಸಾಗುವ ಮುಖ್ಯ ರಸ್ತೆಯ ಕೇವಲ ಒಂದು ಕಿ.ಮಿ ದೂರದಲ್ಲಿ ಈ ದುರಾವಸ್ಥೆಯ ಬಸ್‍ತಂಗುದಾಣವಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಶ್ರಯಿಸುವ ತಾಣವಿದು. ಆದರೆ ಈಗ ತಂಗುದಾಣವೇ ಭಯಕ್ಕೆ ಕಾರಣವಾಗಿದೆ.

ಮೂರು ವರ್ಷಗಳ ಹಿಂದೆ ತಂಗುದಾಣದ ಛಾವಣಿಗೆ ಅಳವಡಿಸಿದ್ದ ಮರದ ಪಕ್ಕಾಸು ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿತ್ತು. ಇದನ್ನು ಗಮನಿಸಿದ್ದ ಸ್ಥಳೀಯರು ಛಾವಣಿಗೆ ತಾತ್ಕಾಲಿಕ ಎಂಬಂತೆ ಕಂಬವೊಂದನ್ನು ಆಧಾರವಾಗಿ ಇಟ್ಟಿದ್ದಾರೆ. ಆದರೆ ಅದೇ ಪರ್ಮನೆಂಟಾಗಿ ಈಗ ಶಿಥಿಲಾವಸ್ಥೆಗೆ ತಲಪಿದೆ. ಗಾಳಿ ಮಳೆಗೆ ತಂಗುದಾಣದ ಛಾವಣಿ ಪೂರ್ಣವಾಗಿ ಕುಸಿದು ಬೀಳುವ ಅಪಾಯವಿದ್ದು, ಮೂರು ವರ್ಷಗಳು ಸಂದರೂ ದುರಸ್ಥಿ ಆಗದೇ ಇರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳಿಯರಾದ ಪ್ರವೀಣ್ ಕಾವಿನಮೂಲೆ ಮಾತನಾಡುತ್ತಾ, ” ಮೂರು ವರ್ಷಗಳಿಂದ ದುರಸ್ಥಿಗೊಳಿಸದೆ ಇರುವುದು ಆಡಳಿತ ವರ್ಗದ ನಿರ್ಲಕ್ಷ್ಯ ತೋರಿಸುತ್ತದೆ. ಮಳೆಗಾಲದ ಮೊದಲು ದುರಸ್ಥಿಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಳ್ಳಾರೆ ಗ್ರಾಪಂ ಪಿಡಿಒ ಧನಂಜಯ ಕೆ ಆರ್, ” ತಂಗುದಾಣವನ್ನು ಪರಿಶೀಲಿಸಿ ದುರಸ್ಥಿಯ ಬಗ್ಗೆ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು. ಬೀಳುವ ಸ್ಥಿತಿಯಲ್ಲಿದ್ದರೆ ತಕ್ಷಣ ಸರಿಪಡಿಸಲಾಗುವುದು.” ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

12 minutes ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago