ಸುದ್ದಿಗಳು

“ಕಾವೇರಿ ಕೂಗು” ಅಭಿಯಾನಕ್ಕೆ ಚಾಲನೆ ನೀಡಿದ ಸದ್ಗುರು ಜಗ್ಗಿ ವಾಸುದೇವ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ :ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಮತ್ತು ಅಂತರ್ಜಲವನ್ನು ಸಂರಕ್ಷಿಸಿಕೊಳ್ಳುವ ಶಕ್ತಿಯ ಕೊರತೆ ಭೂಮಿಯಲ್ಲಿ ಕಂಡು ಬರುತ್ತಿದೆ. ಇದೇ ಕಾರಣಕ್ಕೆ ಪ್ರವಾಹ ಅಥವಾ ಬರಗಾಲ ಸೃಷ್ಟಿಯಾಗಿ ಮಾನವ ಕುಲ ಕಷ್ಟ, ನಷ್ಟಗಳನ್ನು ಅನುಭವಿಸುತ್ತಿದೆ. ಗಿಡ ಮರಗಳನ್ನು ನೆಡುವ ಮೂಲಕ ಇಂತಹ ಅನಾಹುತಗಳನ್ನು ಶಾಶ್ವತವಾಗಿ ತಪ್ಪಿಸಬಹುದಾಗಿದೆ ಎಂದು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

ಅರಣ್ಯ ಕೃಷಿಗೆ ಸ್ಫೂರ್ತಿ ನೀಡುವ “ಕಾವೇರಿ ಕೂಗು” ಅಭಿಯಾನಕ್ಕೆ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಸದ್ಗುರು ಮಾತನಾಡಿದರು.
“ಕಾವೇರಿ ಕೂಗು” ಅಭಿಯಾನ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್ ವರೆಗೆ ಬೈಕ್ ರ್ಯಾಲಿ ಮೂಲಕ ಸಾಗಲಿದ್ದು, ಸಾರ್ವಜನಿಕರಿಗೆ ಹಾಗೂ ರೈತರಿಗೆ ಗಿಡ, ಮರ ಬೆಳೆಸುವ ಅರಿವು ಮೂಡಿಸಲಾಗುತ್ತಿದೆ ಎಂದು ಸದ್ಗುರು ಹೇಳಿದರು.

 

ಈ ಸಂದರ್ಭ ಹಾಜರಿದ್ದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕಾವೇರಿ ನದಿ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಸದ್ಗುರುಗಳು ಇದಕ್ಕೆ ಪೂರಕವಾಗಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Advertisement

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಬಗ್ಗೆ ನೈಜ ಕಾಳಜಿ ಹೊಂದಿರುವ ಜನರಿದ್ದಾರೆ. ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಜನರ ಸಂಕಷ್ಟಗಳಿಗೆ ಎಲ್ಲರೂ ಸಹಕರಿಸುವ ಅಗತ್ಯವಿದೆ ಎಂದರು.

ಚಲನಚಿತ್ರ ನಟರಾದ ರಕ್ಷಿತ್ ಶೆಟ್ಟಿ, ದಿಗಂತ್, ಬಿಗ್‍ಬಾಸ್ ವಿಜೇತ ಶಶಿ ಬೈಕ್ ಜಾಥಾಗೆ ಸಾಥ್ ನೀಡುವುದರೊಂದಿಗೆ ಒಟ್ಟು 25 ಜನರ ತಂಡ ತಲಕಾವೇರಿಯಿಂದ ಭಾಗಮಂಡಲ ಮೂಲಕ ಮಡಿಕೇರಿ ಕಡೆಗೆ ತೆರಳಿತು. ಸದ್ಗುರುಗಳು ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ತಮ್ಮ ತಂಡದೊಂದಿಗೆ ಬೈಕ್ ಜಾಥಾದಲ್ಲಿ ತೆರಳಿದರು. ಕ್ಷೇತ್ರದ ಅರ್ಚಕರಾದ ನಾರಾಯಣ ಆಚಾರ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಸ್ಥಳೀಯ ಪ್ರಮುಖರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸದ್ಗುರು ಜಗ್ಗಿ ವಾಸುದೇವ್ ಮತ್ತು ತಂಡವನ್ನು ಬರಮಾಡಿಕೊಂಡು ಅಭಿಯಾನಕ್ಕೆ ಶುಭ ಹಾರೈಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

9 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

19 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

20 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

21 hours ago