Advertisement
ಸುದ್ದಿಗಳು

“ಕಾವೇರಿ ಕೂಗು” ಅಭಿಯಾನಕ್ಕೆ ಚಾಲನೆ ನೀಡಿದ ಸದ್ಗುರು ಜಗ್ಗಿ ವಾಸುದೇವ್

Share

ಮಡಿಕೇರಿ :ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಮತ್ತು ಅಂತರ್ಜಲವನ್ನು ಸಂರಕ್ಷಿಸಿಕೊಳ್ಳುವ ಶಕ್ತಿಯ ಕೊರತೆ ಭೂಮಿಯಲ್ಲಿ ಕಂಡು ಬರುತ್ತಿದೆ. ಇದೇ ಕಾರಣಕ್ಕೆ ಪ್ರವಾಹ ಅಥವಾ ಬರಗಾಲ ಸೃಷ್ಟಿಯಾಗಿ ಮಾನವ ಕುಲ ಕಷ್ಟ, ನಷ್ಟಗಳನ್ನು ಅನುಭವಿಸುತ್ತಿದೆ. ಗಿಡ ಮರಗಳನ್ನು ನೆಡುವ ಮೂಲಕ ಇಂತಹ ಅನಾಹುತಗಳನ್ನು ಶಾಶ್ವತವಾಗಿ ತಪ್ಪಿಸಬಹುದಾಗಿದೆ ಎಂದು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಕೃಷಿಗೆ ಸ್ಫೂರ್ತಿ ನೀಡುವ “ಕಾವೇರಿ ಕೂಗು” ಅಭಿಯಾನಕ್ಕೆ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಸದ್ಗುರು ಮಾತನಾಡಿದರು.
“ಕಾವೇರಿ ಕೂಗು” ಅಭಿಯಾನ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್ ವರೆಗೆ ಬೈಕ್ ರ್ಯಾಲಿ ಮೂಲಕ ಸಾಗಲಿದ್ದು, ಸಾರ್ವಜನಿಕರಿಗೆ ಹಾಗೂ ರೈತರಿಗೆ ಗಿಡ, ಮರ ಬೆಳೆಸುವ ಅರಿವು ಮೂಡಿಸಲಾಗುತ್ತಿದೆ ಎಂದು ಸದ್ಗುರು ಹೇಳಿದರು.

 

ಈ ಸಂದರ್ಭ ಹಾಜರಿದ್ದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕಾವೇರಿ ನದಿ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಸದ್ಗುರುಗಳು ಇದಕ್ಕೆ ಪೂರಕವಾಗಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಬಗ್ಗೆ ನೈಜ ಕಾಳಜಿ ಹೊಂದಿರುವ ಜನರಿದ್ದಾರೆ. ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಜನರ ಸಂಕಷ್ಟಗಳಿಗೆ ಎಲ್ಲರೂ ಸಹಕರಿಸುವ ಅಗತ್ಯವಿದೆ ಎಂದರು.

ಚಲನಚಿತ್ರ ನಟರಾದ ರಕ್ಷಿತ್ ಶೆಟ್ಟಿ, ದಿಗಂತ್, ಬಿಗ್‍ಬಾಸ್ ವಿಜೇತ ಶಶಿ ಬೈಕ್ ಜಾಥಾಗೆ ಸಾಥ್ ನೀಡುವುದರೊಂದಿಗೆ ಒಟ್ಟು 25 ಜನರ ತಂಡ ತಲಕಾವೇರಿಯಿಂದ ಭಾಗಮಂಡಲ ಮೂಲಕ ಮಡಿಕೇರಿ ಕಡೆಗೆ ತೆರಳಿತು. ಸದ್ಗುರುಗಳು ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ತಮ್ಮ ತಂಡದೊಂದಿಗೆ ಬೈಕ್ ಜಾಥಾದಲ್ಲಿ ತೆರಳಿದರು. ಕ್ಷೇತ್ರದ ಅರ್ಚಕರಾದ ನಾರಾಯಣ ಆಚಾರ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಸ್ಥಳೀಯ ಪ್ರಮುಖರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸದ್ಗುರು ಜಗ್ಗಿ ವಾಸುದೇವ್ ಮತ್ತು ತಂಡವನ್ನು ಬರಮಾಡಿಕೊಂಡು ಅಭಿಯಾನಕ್ಕೆ ಶುಭ ಹಾರೈಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

11 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago