ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.
ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್ಕೋಟ್ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.
ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.
ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…