ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.
ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್ಕೋಟ್ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.
ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.
ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…