Advertisement
Categories: Uncategorized

ಕಾವೇರಿ ನಾಡಿಗೆ ಮುಂಗಾರು ಹನಿ ಸಿಂಚನ

Share

ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ  ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.

ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.

Advertisement

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್‍ಕೋಟ್‍ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.

Advertisement

ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

 

Advertisement

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago