ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.
ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್ಕೋಟ್ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.
ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.
ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…