Advertisement
Categories: Uncategorized

ಕಾವೇರಿ ನಾಡಿಗೆ ಮುಂಗಾರು ಹನಿ ಸಿಂಚನ

Share

ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ  ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.

ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್‍ಕೋಟ್‍ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.

ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

5 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

7 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

14 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago