Advertisement
ಸುದ್ದಿಗಳು

ಕಾಶ್ಮೀರಕ್ಕೆ ಆರ್ಟಿಕಲ್ 370 ಎಂಬುದು ಕಾನೂನಿನ ಪರದೆಯಷ್ಟೆ: ಕ್ಯಾ.ಬ್ರಿಜೇಶ್ ಚೌಟ

Share

ಪುತ್ತೂರು: ಭಾರತದ ಭೂಪ್ರದೇಶದಲ್ಲೇ ಬಹುಮುಖ್ಯ ಸೂಕ್ಷ್ಮ ಪ್ರದೇಶ ಕಾಶ್ಮೀರ. ಇದೇ ಕಾರಣಕ್ಕೆ ಭಾರತ-ಪಾಕಿಸ್ಥಾನದ ಗಡಿ ವಿವಾದವಾಗಿ ಗುರುತಿಸಲ್ಪಟ್ಟಿದೆ. ಹಿಂದೆ ಸಂವಿಧಾನ ರಚನಾ ಪ್ರಕ್ರಿಯೆ ಸಂದರ್ಭ ನಡೆದ ಕೆಲವೊಂದು ಗೊಂದಲಗಳಿಂದ ಜಮ್ಮು-ಕಾಶ್ಮೀರಕ್ಕೆ ‘ಆರ್ಟಿಕಲ್ 370’ ಎಂಬ ವಿಶೇಷ ಸ್ಥಾನವನ್ನು ನೀಡಬೇಕಾಯಿತು. ಆದರೆ ಈ ಆರ್ಟಿಕಲ್ ಕಾಶ್ಮೀರಕ್ಕೆ ಕಾನೂನಿನ ಪರದೆಯನ್ನು ನೀಡಿ ಕೆಲವು ಚಟುವಟಿಕೆಗಳಿಗೆ ಆಸ್ಪದವನ್ನು ನೀಡುತ್ತಿತ್ತು. ಬದಲಾಗಿ ಇದರಿಂದ ಆ ಪ್ರದೇಶದ ಅಭಿವೃದ್ಧಿ ಈವರೆಗೆ ನಡೆದೇ ಇಲ್ಲ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಎಂದು ಅಭಿಪ್ರಾಯಟ್ಟರು.

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ‘ಆರ್ಟಿಕಲ್ 370’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

‘ಆರ್ಟಿಕಲ್ 370 ಹಾಗೂ 35ಎ’ ನಿಂದ ಜಮ್ಮು-ಕಾಶ್ಮೀರವನ್ನು ಭಾರತದಿಂದ ದೂರಮಾಡಿದೆ. ಹಾಗೂ ಅಲ್ಲಿನ ಅಭಿವೃದ್ಧಿಗೆ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಮಾತ್ರವಲ್ಲದೆ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಅಲ್ಲಿನ ಜನರಿಗೆ ಸಾಧ್ಯವಾಗಿಲ್ಲ. ಏಕೆಂದರೆ ಮಾಹಿತಿ ಹಕ್ಕು, ಮಹಿಳಾ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಪಡೆಯಲು ಅಲ್ಲಿನ ಸಾಮಾನ್ಯ ಜನರು ವಿಫಲರಾಗಿದ್ದಾರೆ. ಏಕೆಂದರೆ ಆಡಳಿತ ವ್ಯವಸ್ಥೆಯಲ್ಲಿನ ಕೆಲವೊಂದು ಲೋಪಗಳು ಇದಕ್ಕೆ ಅಡೆತಡೆಯಾಗಿತ್ತು ಎಂದರು. ಆದರೆ ಈ ಆರ್ಟಿಕಲ್ ಅನ್ನು ತೆಗೆದ ಅನಂತ ಕೆಲವು ಬದಲಾವಣೆಗಳು ಈಗ ಆರಂಭವಾಗಿದೆ. ದೇಶದ ಕುರಿತು ಅಭಿಮಾನ ಹೊಂದಿದವರು ಇಂದು ದೇಶದ ಬಗ್ಗೆ ಮಾತನಾಡುತ್ತಿಲ್ಲ. ಹಾಗೆಂದು ಭಾರತದಲ್ಲಿ ಜ್ಞಾನದ ಕೊರತೆಯಿಲ್ಲ. ಬದಲಾಗಿ ದೇಶವನ್ನು ದೂರುವವರು ಮಾತ್ರ ಮಾತನಾಡುತ್ತಿದ್ದಾರೆ. ಹಾಗಾಗಿ ಇಂದು ದೇಶ ಪ್ರೇಮಿಗಳು ಅಥವಾ ಪ್ರಜ್ಞಾವಂತರು ಈ ಕುರಿತು ಸತ್ಯವನ್ನು ತಿಳಿದು ಮಾತನಾಡುವಂತಾಗಬೇಕು ಎಂದರು.

ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಎಸ್ಟೇಟ್ ಮ್ಯಾನೇಜರ್ ಲಕ್ಷ್ಮೀ ಪ್ರಸಾದ್, ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಎಚ್.ಜಿ. ಶ್ರೀಧರ್, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕಿ ಸುಷ್ಮಿತಾ ಜೆ., ರಾಧಿಕ ಕಾನತಡ್ಕ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ, ವಿವೇಕಾನಂದ ಮಲ್ಟಿ ಮೀಡಿಯಾ ಸ್ಟುಡಿಯೋದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ಸ್ವಾಗತಿಸಿ, ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

22 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago