Advertisement
ಸುದ್ದಿಗಳು

ಕಾಶ್ಮೀರಕ್ಕೆ ಆರ್ಟಿಕಲ್ 370 ಎಂಬುದು ಕಾನೂನಿನ ಪರದೆಯಷ್ಟೆ: ಕ್ಯಾ.ಬ್ರಿಜೇಶ್ ಚೌಟ

Share

ಪುತ್ತೂರು: ಭಾರತದ ಭೂಪ್ರದೇಶದಲ್ಲೇ ಬಹುಮುಖ್ಯ ಸೂಕ್ಷ್ಮ ಪ್ರದೇಶ ಕಾಶ್ಮೀರ. ಇದೇ ಕಾರಣಕ್ಕೆ ಭಾರತ-ಪಾಕಿಸ್ಥಾನದ ಗಡಿ ವಿವಾದವಾಗಿ ಗುರುತಿಸಲ್ಪಟ್ಟಿದೆ. ಹಿಂದೆ ಸಂವಿಧಾನ ರಚನಾ ಪ್ರಕ್ರಿಯೆ ಸಂದರ್ಭ ನಡೆದ ಕೆಲವೊಂದು ಗೊಂದಲಗಳಿಂದ ಜಮ್ಮು-ಕಾಶ್ಮೀರಕ್ಕೆ ‘ಆರ್ಟಿಕಲ್ 370’ ಎಂಬ ವಿಶೇಷ ಸ್ಥಾನವನ್ನು ನೀಡಬೇಕಾಯಿತು. ಆದರೆ ಈ ಆರ್ಟಿಕಲ್ ಕಾಶ್ಮೀರಕ್ಕೆ ಕಾನೂನಿನ ಪರದೆಯನ್ನು ನೀಡಿ ಕೆಲವು ಚಟುವಟಿಕೆಗಳಿಗೆ ಆಸ್ಪದವನ್ನು ನೀಡುತ್ತಿತ್ತು. ಬದಲಾಗಿ ಇದರಿಂದ ಆ ಪ್ರದೇಶದ ಅಭಿವೃದ್ಧಿ ಈವರೆಗೆ ನಡೆದೇ ಇಲ್ಲ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಎಂದು ಅಭಿಪ್ರಾಯಟ್ಟರು.

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ‘ಆರ್ಟಿಕಲ್ 370’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

‘ಆರ್ಟಿಕಲ್ 370 ಹಾಗೂ 35ಎ’ ನಿಂದ ಜಮ್ಮು-ಕಾಶ್ಮೀರವನ್ನು ಭಾರತದಿಂದ ದೂರಮಾಡಿದೆ. ಹಾಗೂ ಅಲ್ಲಿನ ಅಭಿವೃದ್ಧಿಗೆ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಮಾತ್ರವಲ್ಲದೆ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಅಲ್ಲಿನ ಜನರಿಗೆ ಸಾಧ್ಯವಾಗಿಲ್ಲ. ಏಕೆಂದರೆ ಮಾಹಿತಿ ಹಕ್ಕು, ಮಹಿಳಾ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಪಡೆಯಲು ಅಲ್ಲಿನ ಸಾಮಾನ್ಯ ಜನರು ವಿಫಲರಾಗಿದ್ದಾರೆ. ಏಕೆಂದರೆ ಆಡಳಿತ ವ್ಯವಸ್ಥೆಯಲ್ಲಿನ ಕೆಲವೊಂದು ಲೋಪಗಳು ಇದಕ್ಕೆ ಅಡೆತಡೆಯಾಗಿತ್ತು ಎಂದರು. ಆದರೆ ಈ ಆರ್ಟಿಕಲ್ ಅನ್ನು ತೆಗೆದ ಅನಂತ ಕೆಲವು ಬದಲಾವಣೆಗಳು ಈಗ ಆರಂಭವಾಗಿದೆ. ದೇಶದ ಕುರಿತು ಅಭಿಮಾನ ಹೊಂದಿದವರು ಇಂದು ದೇಶದ ಬಗ್ಗೆ ಮಾತನಾಡುತ್ತಿಲ್ಲ. ಹಾಗೆಂದು ಭಾರತದಲ್ಲಿ ಜ್ಞಾನದ ಕೊರತೆಯಿಲ್ಲ. ಬದಲಾಗಿ ದೇಶವನ್ನು ದೂರುವವರು ಮಾತ್ರ ಮಾತನಾಡುತ್ತಿದ್ದಾರೆ. ಹಾಗಾಗಿ ಇಂದು ದೇಶ ಪ್ರೇಮಿಗಳು ಅಥವಾ ಪ್ರಜ್ಞಾವಂತರು ಈ ಕುರಿತು ಸತ್ಯವನ್ನು ತಿಳಿದು ಮಾತನಾಡುವಂತಾಗಬೇಕು ಎಂದರು.

ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಎಸ್ಟೇಟ್ ಮ್ಯಾನೇಜರ್ ಲಕ್ಷ್ಮೀ ಪ್ರಸಾದ್, ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಎಚ್.ಜಿ. ಶ್ರೀಧರ್, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕಿ ಸುಷ್ಮಿತಾ ಜೆ., ರಾಧಿಕ ಕಾನತಡ್ಕ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ, ವಿವೇಕಾನಂದ ಮಲ್ಟಿ ಮೀಡಿಯಾ ಸ್ಟುಡಿಯೋದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ಸ್ವಾಗತಿಸಿ, ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

4 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

16 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

16 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago