Advertisement
ಸುದ್ದಿಗಳು

ಕಾಶ್ಮೀರಕ್ಕೆ ಆರ್ಟಿಕಲ್ 370 ಎಂಬುದು ಕಾನೂನಿನ ಪರದೆಯಷ್ಟೆ: ಕ್ಯಾ.ಬ್ರಿಜೇಶ್ ಚೌಟ

Share

ಪುತ್ತೂರು: ಭಾರತದ ಭೂಪ್ರದೇಶದಲ್ಲೇ ಬಹುಮುಖ್ಯ ಸೂಕ್ಷ್ಮ ಪ್ರದೇಶ ಕಾಶ್ಮೀರ. ಇದೇ ಕಾರಣಕ್ಕೆ ಭಾರತ-ಪಾಕಿಸ್ಥಾನದ ಗಡಿ ವಿವಾದವಾಗಿ ಗುರುತಿಸಲ್ಪಟ್ಟಿದೆ. ಹಿಂದೆ ಸಂವಿಧಾನ ರಚನಾ ಪ್ರಕ್ರಿಯೆ ಸಂದರ್ಭ ನಡೆದ ಕೆಲವೊಂದು ಗೊಂದಲಗಳಿಂದ ಜಮ್ಮು-ಕಾಶ್ಮೀರಕ್ಕೆ ‘ಆರ್ಟಿಕಲ್ 370’ ಎಂಬ ವಿಶೇಷ ಸ್ಥಾನವನ್ನು ನೀಡಬೇಕಾಯಿತು. ಆದರೆ ಈ ಆರ್ಟಿಕಲ್ ಕಾಶ್ಮೀರಕ್ಕೆ ಕಾನೂನಿನ ಪರದೆಯನ್ನು ನೀಡಿ ಕೆಲವು ಚಟುವಟಿಕೆಗಳಿಗೆ ಆಸ್ಪದವನ್ನು ನೀಡುತ್ತಿತ್ತು. ಬದಲಾಗಿ ಇದರಿಂದ ಆ ಪ್ರದೇಶದ ಅಭಿವೃದ್ಧಿ ಈವರೆಗೆ ನಡೆದೇ ಇಲ್ಲ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಎಂದು ಅಭಿಪ್ರಾಯಟ್ಟರು.

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ‘ಆರ್ಟಿಕಲ್ 370’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

‘ಆರ್ಟಿಕಲ್ 370 ಹಾಗೂ 35ಎ’ ನಿಂದ ಜಮ್ಮು-ಕಾಶ್ಮೀರವನ್ನು ಭಾರತದಿಂದ ದೂರಮಾಡಿದೆ. ಹಾಗೂ ಅಲ್ಲಿನ ಅಭಿವೃದ್ಧಿಗೆ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಮಾತ್ರವಲ್ಲದೆ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಅಲ್ಲಿನ ಜನರಿಗೆ ಸಾಧ್ಯವಾಗಿಲ್ಲ. ಏಕೆಂದರೆ ಮಾಹಿತಿ ಹಕ್ಕು, ಮಹಿಳಾ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಪಡೆಯಲು ಅಲ್ಲಿನ ಸಾಮಾನ್ಯ ಜನರು ವಿಫಲರಾಗಿದ್ದಾರೆ. ಏಕೆಂದರೆ ಆಡಳಿತ ವ್ಯವಸ್ಥೆಯಲ್ಲಿನ ಕೆಲವೊಂದು ಲೋಪಗಳು ಇದಕ್ಕೆ ಅಡೆತಡೆಯಾಗಿತ್ತು ಎಂದರು. ಆದರೆ ಈ ಆರ್ಟಿಕಲ್ ಅನ್ನು ತೆಗೆದ ಅನಂತ ಕೆಲವು ಬದಲಾವಣೆಗಳು ಈಗ ಆರಂಭವಾಗಿದೆ. ದೇಶದ ಕುರಿತು ಅಭಿಮಾನ ಹೊಂದಿದವರು ಇಂದು ದೇಶದ ಬಗ್ಗೆ ಮಾತನಾಡುತ್ತಿಲ್ಲ. ಹಾಗೆಂದು ಭಾರತದಲ್ಲಿ ಜ್ಞಾನದ ಕೊರತೆಯಿಲ್ಲ. ಬದಲಾಗಿ ದೇಶವನ್ನು ದೂರುವವರು ಮಾತ್ರ ಮಾತನಾಡುತ್ತಿದ್ದಾರೆ. ಹಾಗಾಗಿ ಇಂದು ದೇಶ ಪ್ರೇಮಿಗಳು ಅಥವಾ ಪ್ರಜ್ಞಾವಂತರು ಈ ಕುರಿತು ಸತ್ಯವನ್ನು ತಿಳಿದು ಮಾತನಾಡುವಂತಾಗಬೇಕು ಎಂದರು.

ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಎಸ್ಟೇಟ್ ಮ್ಯಾನೇಜರ್ ಲಕ್ಷ್ಮೀ ಪ್ರಸಾದ್, ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಎಚ್.ಜಿ. ಶ್ರೀಧರ್, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕಿ ಸುಷ್ಮಿತಾ ಜೆ., ರಾಧಿಕ ಕಾನತಡ್ಕ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ, ವಿವೇಕಾನಂದ ಮಲ್ಟಿ ಮೀಡಿಯಾ ಸ್ಟುಡಿಯೋದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ಸ್ವಾಗತಿಸಿ, ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

14 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

14 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

14 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago