Advertisement
ಧಾರ್ಮಿಕ

ಕಾಷ್ಠದಲ್ಲಿ ಸುಂದರವಾಗಿ ಅರಳಿದೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ…

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ.ನೂತನ ಬ್ರಹ್ಮರಥದ ಕೆಲಸ ಕಾರ್ಯಗಳು ಬಹುತೇಕ ಪೂರ್ತಿಗೊಂಡಿದೆ. 2000 ಸಿ ಎಪ್‍ ಟಿ  ವಿವಿಧ ಜಾತಿಯ ಮರ ಬಳಸಿಕೊಳ್ಳಲಾಗಿದೆ .ಕೇವಲ 7 ತಿಂಗಳಲ್ಲಿ ಸುಂದರವಾದ ಕೆತ್ತನೆಗಳೊಂದಿಗೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ನಿರ್ಮಿಸಲಾಗಿದೆ.  ನವರಾತ್ರಿ ಆರಂಭವಾಗುವ ಹೊತ್ತಿಗೆ ಸೆ.29 ರಂದು ರಥವನ್ನು ಬಿಟ್ಟು ಕೊಡಲಾಗುತ್ತಿದೆ.ಬಳಿಕ ಸೆ.30 ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ಟ್ರಾಲಿಯ ಮೂಲಕ ಬರಲಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸುಮಾರು 400 ವರ್ಷಗಳ ಪುರಾತನವಾದ ರಥ ಈಗ ಇದೆ. ಈ ಅಳತೆಗೆ, ಶಾಸ್ತ್ರಕ್ಕೆ ಯಾವುದೇ ಧಕ್ಕೆಯಾಗದಂತೆ ಅದೇ ಮಾದರಿಯಲ್ಲಿ ಈಗ ಬ್ರಹ್ಮರಥ ನಿರ್ಮಾಣ ಮಾಡಲಾಗಿದೆ.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮಾರ್ಗದರ್ಶನದಲ್ಲಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಲ್ಲಿ ಬ್ರಹ್ಮರಥ ನಿರ್ಮಾಣಗೊಳ್ಳುತ್ತಿದ್ದು ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ರೈ ಕಡಬ ದಾನ ರೂಪದಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿಕೊಡುತ್ತಿದ್ದಾರೆ.

ನೂತನ ರಥ ಹೀಗಿದೆ…

ನೂತನ ಬ್ರಹ್ಮರಥವು ಹಳೆಯ ಬ್ರಹ್ಮರಥದ ಮಾದರಿಯಲ್ಲೇ ನಿರ್ಮಾಣ ಮಾಡಲಾಗುತ್ತಿದ್ದು  ರಥ ನೆಲದಿಂದ ಕಲಶದ ತುದಿವರೆಗೆ 63 ಅಡಿ ಎತ್ತರವಿರುತ್ತದೆ. ನೆಲದಿಂದ ರಥದ ಜಿಡ್ಡೆಯ ತನಕ 17 ಅಡಿ ಎತ್ತರವಿದ್ದರೆ  ಚಕ್ರ 8 ಅಡಿ ಎತ್ರರವಿದೆ. ಅಂದಾಜು 22 ಟನ್ ತೂಕ ರಥ ಹೊಂದಿದೆ. 16 ಅಂತಸ್ತುಗಳನ್ನು ಹೊಂದಿದೆ. ರಥಕ್ಕೆ ಬೇಕಾದ ಮರಗಳನ್ನು ಉತ್ತರ ಭಾರತದಿಂದ ಸಾಗುವಾನಿ,  ಗುಜರಾತಿನಿಂದ ಭೋಗಿಮರ ಹಾಗೂ ಸುಬ್ರಹ್ಮಣ್ಯ ಪ್ರಾಂತ್ಯದಿಂದ ಕಿರಾಲ್ ಬೋಗಿ  ಮರ ತರಲಾಗಿದೆ.

ರಥಲ್ಲಿ ವಿವಿಧ ಕೆತ್ತನೆಗಳು ಇವೆ. ಪ್ರಮುಖವಾಗಿ ಸುಬ್ರಹ್ಮಣ್ಯ ಸ್ವಾಮಿಯ ಲೀಲಾವಳಿಗಳು, ಅಷ್ಟ ದಿಗ್ಫಾಲಕರು, ಮಹಾಭಾರತ, ಪಾರ್ವತಿ ಕಲ್ಯಾಣ, ದಕ್ಷಯಜ್ಞ, ಪುತ್ರಕಾಮೇಷ್ಠಿಯಾಗ , ಚತುರ್ವಂಶಿ ವಿಗ್ರಹ, ಶಿವನ ವಿವಿಧ ಲೀಲಾವಳಿಗಳು ಹಾಗೂ ಪ್ರಪಂಚದ ಸಕಲ ಜೀವರಾಧಿಗಳಿರುವ  ಚಿತ್ರಗಳ ಕೆತ್ತನೆಯಿಂದ ಕೂಡಿದೆ. ರಥದಲ್ಲಿನ ಕಲೆಗಾಗಿ ಸಾಗುವಾನಿ ಮರ ಬಳಸಿಕೊಳ್ಳಲಾಗಿದೆ. ಚಕ್ರ ಮತ್ತು ಅಚ್ಚಿಗೆ ಬೋಗಿಮರ ಉಪಯೋಗಿಸಲಾಗಿದೆ.

 ಸೆ.29 ರಂದು  ರಥ ದಾನಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ರಥ ಹಸ್ತಾಂತರಿಸಲಾಗುತ್ತಿದೆ.ಬಳಿಕ  ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಾಕಲಾ ಶಾಲೆಯಿಂದ ರಥ ಕುಕ್ಕೆಗೆ ಹೊರಡಲಿದೆ.ಮಂಗಳೂರು ಪಡೀಲ್ ಉಪ್ಪಿನಂಗಡಿ-ಕಡಬ ಮಾರ್ಗವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ  ಅ.3 ರಂದು ತಲುಪಲಿದೆ ಎಂದು ಕುಕ್ಕೆ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

8 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

11 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

20 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago